2024ನೇ ಸಾಲಿನ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಹೆಸರುಗಳನ್ನು ಶಿಫಾರಸು ಮಾಡಲು ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ 
ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 22

 ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2024ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಶ್ರೇಷ್ಠತೆಗಳಿಸಿ ಅಸಾಧರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಕಲೆ(ಜನಪ್ರಿಯ ಕಲೆ, ಸಂಗೀತ,ಚಿತ್ರಕಲೆ,ವಾಸ್ತು ಶಿಲ್ಪ,ಶಿಲ್ಪಕಲೆ ಚಲನಚಿತ್ರ ಛಾಯಾಗ್ರಹಣ ಮತ್ತಿತರ), ಸಮಾಜ ಕಾರ್ಯ (ಸಮಾಜ ಸೇವೆ ಧರ್ಮಾರ್ಥ ಸೇವೆ, ಸಮುದಾಯ ಯೋಜನೆಯ ನಿಮಿತ್ತದ ಕೊಡುಗೆ ಒಳಗೊಂಡಂತೆ ), ಸಾರ್ವಜನಿಕ ವ್ಯವಹಾರ (ಕಾನೂನು ಮತ್ತು ಸಾರ್ವಜನಿಕ ಜೀವನ, ರಾಜಕೀಯ ಇತ್ಯಾದಿ ), ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರ ಗೌರವನ್ವಿತ ವೃತ್ತಿ (ಬಾಹ್ಯಕಾಶ, ಇಂಜಿನೀಯರಿಂಗ್, ಅಣು
ವಿಜ್ಞಾನ, ಮಾಹಿತಿ ತಂತ್ರಜ್ಞಾನ ಸಂಶೋಧನೆ ಇತ್ಯಾದಿ),

.          ವ್ಯಾಪಾರ ಮತ್ತು ಕೈಗಾರಿಕೆ(ಬ್ಯಾಂಕಿಂಗ್,ಆರ್ಥಿಕ ಚಟುವಟಿಕೆ, ಮ್ಯಾನೇಜ್ಮೆಂಟ್, ಪ್ರವಾಸೋಧ್ಯಮ ಅಭಿವೃದ್ಧಿ

ಮತ್ತು ವಾಣಿಜ್ಯ ಒಳಗೊಂಡಂತೆ), ವೈದ್ಯಕೀಯ (ವೈದಕೀಯ ಸಂಶೋಧನೆ, ಅಯುರ್ವೇದದಲ್ಲಿ ಕುಶಲತೆ, ಹೋಮಿಯೋಪತಿ, ಸಿದ್ದಅಲೋಪತಿ, ನ್ಯಾಚುರೋಪತಿ ಇತ್ಯಾದಿ, ಸಾಹಿತ್ಯ ಮತ್ತು ಶಿಕ್ಷಣ(ಪತ್ರಿಕೋದ್ಯಮ, ಬೋಧನೆ, ಪುಸ್ತಕ ಬರೆಯುವಿಕೆ ಸಾಹಿತ್ಯ, ವೈದ್ಯ,ಶಿಕ್ಷಣ ಅಭಿವೃದ್ಧಿ, ಶಿಕ್ಷಣ ಸುಧಾರಣೆ ಇತ್ಯಾದಿ), ನಾಗರೀಕ ಸೇವೆ(ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ), ಕ್ರೀಡೆ ಅಥ್ಲೆಟಿಕ್ಸ್‌ ಸಾಹಸ ಕ್ರೀಡೆ ಮತ್ತು ಯೋಗ, ಇತರೆ ಕ್ಷೇತ್ರಗಳಾದ ಮಾನವ ಹಕ್ಕುಗಳ ಸಂರಕ್ಷಣೆ, ಭಾರತದ ಸಂಸ್ಕೃತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಒಳಗೊಂಡಂತೆ ಅಸಾಧರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಒಳಪಟ್ಟಿರುವ 4 ತಾಲೂಕುಗಳಲ್ಲಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳು ನಿಗದಿತ ನಮೂನೆಯಲ್ಲಿ ಅಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ವಿವರಗಳೊಂದಿಗೆ ದಿನಾಂಕ 2023ರ ಜೂನ್ 27 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅಯ್ಕೆ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು.

ನಿಗದಿತ ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ, ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.