ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ವಿಜಯ ದರ್ಪಣ ನ್ಯೂಸ್

ದೊಡ್ಡಬಳ್ಳಾಪುರದಲ್ಲಿ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18  : ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು.

ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು.

ನಂತರ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾವನಹಳ್ಳಿ ವೆನ್ಸಾಯಿ ಪ್ಲೋರಿಟೆಕ್ (ಶ್ರೀಕಾಂತ್ ಫಾರಂ) ಭೇಟಿನೀಡಿ Cold room stagging, Refer van
ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು (Rose, Gerbera, Gypsophila, Hydrangia, Limonium Snapdragon etc) ವೀಕ್ಷಿಸಿದರು.
ಎನ್.ಎಸ್.ಆರ್ ಫಾರಂ ಕೃಷ್ಣರಾವ್ ರವರ ಪಾಲಿಮನೆಯಲ್ಲಿ Orchid ಬೇಸಾಯ (Dendrobium)ದ ಬಗ್ಗೆ ರೈತರ ಜೊತೆ ಸಮಾಲೋಚನೆ ನಡೆಸಿದರು.

ದೊಡ್ಡಬಳ್ಳಾಪುರದಲ್ಲಿ ನೇಕಾರರ ಸಂಘದ ನೇಕಾರರ ಚೈತನ್ಯ WPO weavers producer Organisation ಸಂಸ್ಥೆಯಲ್ಲಿ ತಯಾರಿಸಿದ ಸೀರೆಗಳು ವೀಕ್ಷಿಸಿ, ನೇಕಾರ ಸಂಘದ ಅಧ್ಯಕ್ಷರ ಮತ್ತು ಸದಸ್ಯರು ಜೊತೆಗೆ ಸಮಾಲೋಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ‌.ಎನ್ ಅನುರಾಧ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕರಾದ ವಿಠ್ಠಲ ಕಾವಳೆ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು‌ ಉಪಸ್ಥಿತರಿದ್ದರು.