ವಿದ್ಯಾರ್ಥಿಗಳಿಗೆ ಹೂಗುಚ್ಚ ಸಿಹಿ ಹಂಚಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡ ಶಿಕ್ಷಕರು

ವಿಜಯ ದರ್ಪಣ ನ್ಯೂಸ್….

ವಿದ್ಯಾರ್ಥಿಗಳಿಗೆ ಹೂಗುಚ್ಚ ಸಿಹಿ ಹಂಚಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡ ಶಿಕ್ಷಕರು

ತಾಂಡವಪುರ ಮಾರ್ಚ್ 21 : ಮೈಸೂರು ತಾಲೂಕು ಕಡಕೋಳ ಕ್ಲಸ್ಟರ್ ಮಠದ ಏಳು ಶಾಲೆಯ ವಿದ್ಯಾರ್ಥಿಗಳನ್ನು ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಬಿಕೆಟಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸಿಹಿ ವಿತರಿಸಿ ಅದ್ದೂರಿಯಾಗಿ ಸ್ವಾಗತ ಕೋರಿ ಪರೀಕ್ಷೆ ಕೇಂದ್ರಕ್ಕೆ ಬರಮಾಡಿಕೊಂಡರು

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆಟಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಅವರು ನಮ್ಮ ಪಬ್ಲಿಕ್ ಶಾಲೆಯಲ್ಲಿ ಪರೀಕ್ಷೆ ಕೇಂದ್ರವನ್ನು ಶಿಕ್ಷಣ ಇಲಾಖೆ ಗುರುತಿಸಿ ಮಾಡಲಾಗಿದ್ದು ನಮ್ಮ ಶಾಲೆಯಲ್ಲಿ ಎಲ್ಲ ರೀತಿಯ ಸಾಲುಗಳನ್ನು ಕುದಿಸಿಕೊಳ್ಳಲಾಗಿದ್ದು ವಿದ್ಯಾರ್ಥಿಗಳು ಚೆನ್ನಾಗಿ ಬರೆದು ಹೆಚ್ಚು ಅಂಕ ಗಳಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು