ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…
ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ
ಕನಸವಾಡಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಏಪ್ರಿಲ್ 12 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ರವರು ಭಾಗವಹಿಸಿದರು.
ನಂತರ ಮಾತನಾಡಿದ ಸಚಿವರು ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ. ಕನ್ನಡದದ ದಾರ್ಶನಿಕ ಕವಿಗಳಾದ ರನ್ನ ,ಪೊಂಪ, ಕುವೆಂಪು ಹಾಗೂ ಜ್ಞಾನ ಪೀಠ ಪುರಸ್ಕೃತ ರಾದ ಮಾಸ್ತಿವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ,ಚಂದ್ರಶೇಖರ ಕಂಬಾರ ,ಕುವೆಂಪು,ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ನೀಡಿದ್ದಾರೆ .
ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ
ಈ ನೆಲ, ಜಲ,ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.
ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು ಈ ಕನ್ನಡ ಸಾಹಿತ್ಯ ಪರಿಷತ್ತು ಗೆ ಎಲ್ಲಾರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಣಿಕ ಪ್ರಯತ್ನ ವನ್ನು ಮಾಡಲಾಗುವುದು ಎಂದರು.
ಪ್ರತಿಯೊಬ್ಬರಲ್ಲಿ ಕನ್ನಡದ ಬಗ್ಗೆ ಪ್ರತೀ ಬರಬೇಕು ಮತ್ತು ನಾವು ಈ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಹಿರಿಯ ಸಾಹಿತಿಗಳ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್, ಡಿವೈಎಸ್ಪಿ ರವಿ, ಕಾರ್ಯ ನಿರ್ವಹಣಾಧಿಕಾರಿ ಮುನಿರಾಜು,ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ,ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.