ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ : ಜೆಡಿಎಸ್ ಸೇವಾದಳದ ರಾಜ್ಯಾಧ್ಯಕ್ಷ ಬಸವರಾಜು ಪಾದಯಾತ್ರಿ:
ವಿಜಯ ದರ್ಪಣ ನ್ಯೂಸ್ ವಿಜಯಪುರ ಏಪ್ರಿಲ್ 23: ದೇಶದಲ್ಲಿ ಇಂದಿರಾಗಾಂಧಿಯ ಕಾಲದಲ್ಲಿ ಗರಿಬೀ ಹಠಾವೋ, ಘೋಷಣೆಯಿಂದ ಅಧಿಕಾರ ನಡೆಸಿದರೂ, ಇಂದಿಗೂ ಬಡತನ ಹೋಗಲಿಲ್ಲ. ಅದೇ ರೀತಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅಧಿಕಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಸೇವಾದಳದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ಬಸವರಾಜ್ ಪಾದಯಾತ್ರಿ ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಮಂಗಳವಾರ…