ತೈವಾನ್ ಪಿಂಕ್ ಸೀಬೆ ಬೆಳೆಗೆ ನರೇಗಾ ಆಶಾಕಿರಣ
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ,ಡಿಸೆಂಬರ್11 :-ಕೃಷಿ ಭೂಮಿ ರೈತರ ಪ್ರಯೋಗ ಶಾಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೆಟ್ಟಕೋಟೆ ಗ್ರಾಮದ ಚನ್ನೇಗೌಡ ಅವರೇ ಸಾಕ್ಷಿ. ತಮಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಅವರು ತೈವಾನ್ ಪಿಂಕ್ ತಳಿಯ ಸೀಬೆ (ಚೇಪೆ ಹಣ್ಣು) ಬೆಳೆದು ಆದಾಯ ಕಂಡುಕೊಂಡಿದ್ದಾರೆ. ಸಮೃದ್ಧವಾಗಿ ಬೆಳೆದಿರುವ ಸೀಬೆ ಹಣ್ಣಿನ ತೋಟ ನೋಡುಗರ ಬಾಯಿಯಲ್ಲಿ ನೀರೂರಿಸುತ್ತದೆ. ಹೆಚ್ಚು ನೀರು ಬಯಸದ ಸೀಬೆ ಬಯಲು ಸೀಮೆಗೆ ಹೇಳಿ ಮಾಡಿಸಿದ…