ಮಿಡಿದ ನಿನ್ನ ಹೃದಯದಲ್ಲಿ… ಜಯಶ್ರೀ.ಜೆ.ಅಬ್ಬಿಗೇರಿ
ಲಹರಿ ಸಂಗಾತಿ ಮಡಿದ ಹೃದಯದಲ್ಲಿ ಕೊಡಲೆ ನಾ ಹಾಜರಿ… ಜಯಶ್ರೀ.ಜೆ.ಅಬ್ಬಿಗೇರಿ ನನ್ನೊಲವಿನ ರಾಧಾ, ನೀ ಚೂರು ಮರೆಯಾದರೂ ಸಾಕು ಈ ಜೀವ ಚಡಪಡಿಸುತ್ತದೆ. ನಿನ್ನ ಮುಂಗುರುಳಗಳ ಜೊತೆ ಆಟವಾಡುವ ಕೈ ಬೆರಳುಗಳು ಜೀವ…
ಲಹರಿ ಸಂಗಾತಿ ಮಡಿದ ಹೃದಯದಲ್ಲಿ ಕೊಡಲೆ ನಾ ಹಾಜರಿ… ಜಯಶ್ರೀ.ಜೆ.ಅಬ್ಬಿಗೇರಿ ನನ್ನೊಲವಿನ ರಾಧಾ, ನೀ ಚೂರು ಮರೆಯಾದರೂ ಸಾಕು ಈ ಜೀವ ಚಡಪಡಿಸುತ್ತದೆ. ನಿನ್ನ ಮುಂಗುರುಳಗಳ ಜೊತೆ ಆಟವಾಡುವ ಕೈ ಬೆರಳುಗಳು ಜೀವ…
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣ ಇಲ್ಲಿನ ಶಾಂತಿ ನಗರದಲ್ಲಿನ ಮುತ್ಯಾಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಮತ್ತು ಹೂವಿನ ಆರತಿಗಳು ವಿಜೃಂಭಣೆಯಿಂದ ನಡೆದವು. ದೇವಾಲಯವನ್ನು ವಿದ್ಯುತ್ ದೀಪಲಾಂಕಾರ ಹಾಗೂ ವಿಶೇಷ ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು ಮುತ್ಯಾಲಮ್ಮ ದೇವಿ ಮೂಲ ದೇವರಿಗೆ ಮಾಡಲಾಗಿದ್ದ ವಿಶೇಷ ಪಂಜುರ್ಲಿ ಅಲಂಕಾರ ಎಲ್ಲರ ಆಕರ್ಷಣೆಯಾಗಿತ್ತು. ಬೆಳಗ್ಗೆ 11 ಗಂಟೆಗೆ ದೇವಾಲಯದ ಬಳಿಯಿಂದ ಹೊರಟ ಮುತ್ಯಾಲಮ್ಮ ದೇವಿ ಹಾಗೂ ದೊಡ್ಡಮ್ಮ ದೇವಿಯ ರಥೋತ್ಸವದಲ್ಲಿ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು….
ವಿಜಯ ದರ್ಪಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 23 ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 2023ರ ಮೇ 20 ರಿಂದ ಮೇ 23 ರವರೆಗೆ ಸುರಿದ ಅಕಾಲಿಕ ಮಳೆ, ಗಾಳಿಯಿಂದ 30.03 ಹೆಕ್ಟೇರ್ ವಿಸ್ತೀರ್ಣದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ. ಮುಂಗಾರು ಮಳೆ ಆರಂಭವಾಗುವ ಹಿನ್ನೆಲೆಯಲ್ಲಿ ಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್ ಲತಾ ಅವರು ಅಧಿಕಾರಿಗಳಿಗೆ ತಿಳಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿ…
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳ ಮತ್ತು ಇತರೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು, ನಿರ್ದೇಶಕರಗಳ, ಸದಸ್ಯರುಗಳ ನಾಮನಿರ್ದೇಶನಗಳನ್ನು ದಿನಾಂಕ: 22/05/2023 ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ
ವಿಜಯ ದರ್ಪಣ ನ್ಯೂಸ್, ಮೇ.23 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ / ಸೂಚನೆಗಳನ್ನು ನೀಡಿರುತ್ತದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದ್ದಾರೆ. ಗುಡುಗು…
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 23 ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮೇ 22: ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಮತ್ತು ಏನು…
ಬೆಂಗಳೂರು ಮೇ 22 ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
″ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ರಾಜ್ಯದ ಪ್ರಭಾವಿ ಒಕ್ಕಲಿಗರ ಯುವ ನಾಯಕರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲಾ ಜನಾಂಗಗಳ ಜನರ ಒಡನಾಡಿ ಉತ್ತಮ ವಾಗ್ಮೀಗಳು ಆದ ಶರತ್ ಬಚ್ಚೇಗೌಡ ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು ಸಚಿವ ಸ್ಥಾನ ನೀಡಬೇಕೆಂದು ಭಾರತ ಜನ ಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ ಮುನಿಯಪ್ಪ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು ಹೊಸಕೋಟೆ ತಾಲೂಕಿನಲ್ಲಿ ಜಾತಿ ಭೇದವಿಲ್ಲದೆ…
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕನ್ನಡ ಭಾಷೆಗೆ ಅವಮಾನ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ರದ್ದುಗೊಳಿಸಬೇಕೆಂದು ಭಾರತ ಜನ ಜಾಗೃತಿ ಸೇನೆ ರಾಜ್ಯಧ್ಯಕ್ಷ ಸಿ ಮುನಿಯಪ್ಪ ಆಗ್ರಹ ಮಾಡಿದರು . ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತ ಕನ್ನಡ ನಾಡಿನಲ್ಲಿರುವ ಏಳುಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದು, ಕರ್ನಾಟಕದಲ್ಲಿ ಹುಟ್ಟಿ ಬೆಳೆದು ಕನ್ನಡ ನೆಲ ಜಲ ಅನುಭವಿಸಿ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿ ಬೆಂಗಳೂರಿನ ಕನ್ನಡಿಗರ ಮತದಿಂದ ವಿಧಾನಸಭೆಗೆ ಆಯ್ಕೆಯಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರು…