ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 26:  ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ…

Read More

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪ್ರವಾಸಿ ತಾಣಗಳು ದೇಶದ ಅತ್ಯಮೂಲ್ಯ ಸಂಪತ್ತು ಉಸ್ತುವಾರಿ ಸಚಿವ ಕೆ‌.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ ಸೆಪ್ಟೆಂಬರ್ 27 ರ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ತಾಲ್ಲೂಕು ಕಛೇರಿಯಿಂದ ದೇವನಹಳ್ಳಿ ಕೋಟೆಯವರೆಗೆ ಏರ್ಪಡಿಸಿದ್ದ ಸೈಕ್ಲಿಂಗ್ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮಕ್ಕೆ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು…

Read More

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ: ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 26 : ಮಕ್ಕಳ ಭವಿಷ್ಯ ರೂಪಿಸುವುದು ಶಿಕ್ಷಕರ ಕೈಯಲ್ಲಿರುತ್ತದೆ, ದೇಶದ ಅಭಿವೃದ್ಧಿಗಾಗಿ ಮಕ್ಕಳು ಪುಟ್ಟ ಹೆಜ್ಜೆಯಿಂದ ದಿಟ್ಟ ಹೆಜ್ಜೆ ಇಡುವ ವರೆಗೂ ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದು ಅಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ದೇವನಹಳ್ಳಿ ತಾಲ್ಲೂಕು ಆಡಳಿತ, ತಾಲ್ಲೂಕು…

Read More

ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 25 : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಎಂಬ ಸಂದೇಶದೊಂದಿಗೆ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ.‌ ಅಂದು ಬೆಳಗ್ಗೆ 8:30 ಗಂಟೆಗೆ ತಾಲ್ಲೂಕು ಕಛೇರಿಯಿಂದ ದೇವನಹಳ್ಳಿ ಕೋಟೆಯವರೆಗೆ ಸೈಕ್ಲಿಂಗ್ ಮತ್ತು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ…

Read More

ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನತಾ ದರ್ಶನ ಸಹಕಾರಿ: ಸಚಿವ ಕೆ.ಹೆಚ್ ಮುನಿಯಪ್ಪ

 ವಿಜಯ ದರ್ಪಣ ನ್ಯೂಸ್ , ಹೊಸಕೋಟೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ :ಸೆಪ್ಟೆಂಬರ್ 25  ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವುದರಿಂದ ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹೊಸಕೋಟೆ ತಾಲ್ಲೂಕಿನ “ಸೈಯದ್ ಪ್ಯಾಲೆಸ್” (ರಾಷ್ಟ್ರೀಯ ಹೆದ್ದಾರಿ 75 ಎಂ.ವಿ.ಜೆ…

Read More

ಡೆಂಗಿ ಜ್ವರ, ಚಿಕನ್ ಗುನ್ಯ ಬಗ್ಗೆ ಭಯಬೇಡ: ಡಾ.ಸುನೀಲ್ ಕುಮಾರ್

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 22 :- ಸೋಂಕಿತ ಈಡೀಸ್ ಸೊಳ್ಳೆಯು ಕಚ್ಚುವುದರಿಂದ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರವಾದ ಹೊಟ್ಟೆನೋವು, ಮೈ-ಕೈ-ನೋವು, ವಾಕರಿಕೆ, ವಾಂತಿ ಇವುಗಳ ಜೊತೆ ತೀವ್ರವಾದ ಹೊಟ್ಟೆನೋವು, ಬಾಯಿ, ಮೂಗು, ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು, ಚರ್ಮದ ಮೇಲೆ ಗಂಧೆಗಳು, ವಿಪರೀತ ಬಾಯಾರಿಕೆ, ಜ್ಞಾನ ತಪ್ಪುವುದು ಇನ್ನಿತರ ಲಕ್ಷಣಗಳು ಕಂಡು ಬಂದಲ್ಲಿ ಅಥವಾ ಯಾವುದೇ ಜ್ವರ ಲಕ್ಷಣಗಳು ಕಂಡು ಬಂದಲ್ಲಿ…

Read More

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್ 

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 22 : 2023ರ ಅಕ್ಟೋಬರ್ 2 ರಂದು 154ನೇ ಮಹಾತ್ಮ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “154ನೇ ಮಹಾತ್ಮ ಗಾಂಧಿ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ. 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 19: ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ…

Read More

ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್. ಎಸ್ ಭೋಸರಾಜು ಸೂಚನೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ 20  : ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು…

Read More

ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 20 : ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ನಡುವೆ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಅಂಬೇಡ್ಕರ್…

Read More