ಕೈವಾರ ನಾರೇಯಣ ತಾತಯ್ಯ ಯತೀಂದ್ರರ ಸ್ಮರಣೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್  05 ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣ ಕಸಾಪ ನಗರ ಘಟಕ ಉದ್ಘಾಟನೆ ಸಂದರ್ಭದಲ್ಲಿ  ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕನ್ನಡ ಮನಸ್ಸುಗಳಿಗೆ ಕಂಪನ್ನು ಅರಳಿಸುತ್ತಿರುವ ಬಗ್ಗೆ ತುಂಬಾ ಶ್ಲಾಘನೀಯ  ಎಂದು ಪುರಸಭಾ ಉಪಾಧ್ಯಕ್ಷ ಎಂ ಕೇಶವಪ್ಪ ತಿಳಿಸಿದರು. ಅವರು ವಿಜಯಪುರ ಪಟ್ಟಣದ ಕೆರೆಕೋಡಿ ರಸ್ತೆಯಲ್ಲಿರುವ ವೇಮಣ್ಣ ನವರ ಸ್ವಗೃಹದಲ್ಲಿ ಶ್ರೀ ಕ್ಷೇತ್ರ ಕೈವಾರ ನಾರೇಯಣ ತಾತಯ್ಯ ಯತೀಂದ್ರ ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ…

Read More

ಸರ್ಕಾರಿ ಸೇವೆಯಲ್ಲಿರುವವರು ಸಾಮಾಜಿಕ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಿ: ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ.           ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್ 05 ಸರ್ಕಾರಿ ಹಾಗೂ ಸಾರ್ವಜನಿಕ ಸೇವೆಯಲ್ಲಿರುವವರು ಕೇವಲ ಸಂಬಳಕ್ಕಾಗಿ ಕಾರ್ಯನಿರ್ವಹಿಸದೇ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾಜಿಕ ಜವಾಬ್ದಾರಿಯನ್ನರಿತು, ತತ್ವ, ಮೌಲ್ಯಗಳನ್ನು ಅಳವಡಿಸಿಕೊಂಡು, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು…

Read More

ಪರಿಶಿಷ್ಟರಿಗೆ ಮೀಸಲಿಟ್ಟ ಹಣಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದರೆ ಸುಮ್ಮನಿರಲ್ಲ: ಡಾ.ಚಿ.ನಾ.ರಾಮು

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ಆಗಸ್ಟ್ 03 ದಲಿತರ ಪರ ಎಂದು ಬಿಂಬಿಸಿಕೊಳ್ಳಲು ಸದಾ ಹಾತೊರೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಕೊನೆಗೂ ತಮ್ಮ ನಿಜರೂಪ ತೋರಿಸತೊಡಗಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ದಲಿತರನ್ನು ನಂಬಿಸಿ ವಂಚನೆ ಮಾಡುವ ಪಕ್ಷ ಎಂಬುದು ಅಧಿಕಾರಕ್ಕೆ ಬಂದ ಎರಡೂವರೆ ತಿಂಗಳಲ್ಲೇ ಎಲ್ಲರಿಗೂ ಗೊತ್ತಾಗತೊಡಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನವಾದ ಎಸ್ಸಿ ಎಸ್ಪಿ ಮತ್ತು ಟಿಎಸ್ಪಿಗೆ ಸೇರಿದ 11 ಸಾವಿರ ಕೋಟಿ…

Read More

ಮಂಡಿಬೆಲೆ ಗ್ರಾಮ ಪಂಚಾಯಿತಿ ಜೆಡಿಎಸ್ ಮಡಿಲಿಗೆ….

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ ,ಆಗಸ್ಟ್ 02 ದೇವನಹಳ್ಳಿ ತಾಲ್ಲೂಕಿನ ಮಂಡಿಬೆಲೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಇಂದು ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ  ಅಭ್ಯರ್ಥಿ ಎನ್ ಸುಜಾತ ಮಂಜುನಾಥ್  ಮತ್ತು  ಹೆಚ್ಎಂ ಶ್ರೀನಾಥ್  ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಈ ಮೂಲಕ ಮಂಡಿಬೆಲೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳು ಜೆಡಿಎಸ್ ಮಡಿಲಿಗೆ ಬಂದಿದೆ. ಮಂಡಿಬೆಲೆ ಗ್ರಾಮ ಪಂಚಾಯತಿಯಲ್ಲಿ 13 ಜನ ಸದಸ್ಯರಿದ್ದು ,ಅಧ್ಯಕ್ಷರ ಸ್ಥಾನಕ್ಕೆ ಎನ್ ಸುಜಾತ ಮಂಜುನಾಥ್ ಒಬ್ಬರೇ…

Read More

ಶ್ರೀ ಮಠದ ಅಭಿವೃದ್ಧಿಗೆ ಭಕ್ತರ ಸಹಕಾರ ಅಗತ್ಯ: ಶ್ರೀ ಶ್ರೀ ಮಹಾದೇವ ಸ್ವಾಮೀಜಿ.

ವಿಜಯ ದರ್ಪಣ ನ್ಯೂಸ್                                          ವಿಜಯಪುರ, ದೇವನಹಳ್ಳಿ ತಾಲ್ಲೂಕು,                           ಬೆಂಗಳೂರು ಗ್ರಾ ಜಿಲ್ಲೆ .ಅಗಸ್ಟ್ 01 ಶಿವಶರಣರ ಯುಗದ 12 ನೆಯ ಶತಮಾನದಲ್ಲಿ ಶಿವಶರಣ ಹಾಗೂ ವಚನಕಾರರು ಬಸವಣ್ಣನವರು ಸಮಕಾಲಿಕ ಬಸವಣ್ಣ ಚೆನ್ನಬಸವಣ್ಣ…

Read More

ಜೆಡಿಎಸ್ ಮಡಿಲಿಗೆ ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ,            ಬೆಂಗಳೂರು ಗ್ರಾ ಜಿಲ್ಲೆ ಜುಲೈ 31 ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವರಲಕ್ಷ್ಮಿ .ಕೆ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಪಾಧ್ಯಕ್ಷೆ ರಿಜ್ವಾನ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಜೆಡಿಎಸ್ ಮಡಿಲಿಗೆ ಬಂದಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಮಾತನಾಡಿ ಸಂವಿಧಾನದ ಅಡಿಯಲ್ಲಿ…

Read More

ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಸಾವು.

ವಿಜಯ ದರ್ಪಣ ನ್ಯೂಸ್, ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾ ಜಿಲ್ಲೆ. ಜುಲೈ 31  ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಮೃತಪಟ್ಟಿದ್ದಾರೆ.  ದೇವನಹಳ್ಳಿ ತಾಲೂಕಿನ ಬಿಜ್ಜವರ ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತರು. ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಐದು ದಿನಗಳ ಹಿಂದೆ ಬಿಜ್ಜವರದ ಸಂಬಂಧಿಕರ ಮನೆಗೆ ಬಂದಿದ್ದರು….

Read More

ಡಾ.ಎ.ಪಿ.ಜೆ .ಅಬ್ದುಲ್ ಕಲಾಂರವರ ಪುಣ್ಯ ಸ್ಮರಣೆ

ವಿಜಯ ದರ್ಪಣ ನ್ಯೂಸ್, ವಿಜಯಪುರ.        ಬೆಂಗಳೂರು ಗ್ರಾ ಜಿಲ್ಲೆ  ಜುಲೈ 28 ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಡಿದ ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು ,ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿರವರ ಪಂಥಕ್ಕೆ ಸೇರಿದ ಡಾಎಪಿಜೆ ಅಬ್ದುಲ್ ಕಲಾಂ ರವರೆಂದು ವರ್ಣನೆ ಮಾಡುತ್ತಾ ವಿದ್ಯಾರ್ಥಿಗಳು ಸಹ ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕೆಂದು ವಿಶ್ರಾಂತ ಶಿಕ್ಷಕ ಕೆ.ಎಚ್ ಚಂದ್ರಶೇಖರ್ ರವರು ತಿಳಿಸಿದರು ವಿಜಯಪುರ ಅಖಿಲ ಕರ್ನಾಟಕ ಮಿತ್ರ ಸಂಘದ ವತಿಯಿಂದ…

Read More

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾತಿಮ ಸೂಚನೆ.

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ  ಬೆಂಗಳೂರು ಗ್ರಾ  ಜಿಲ್ಲೆ . ಜುಲೈ 26 ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ…

Read More

ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಡಾ.ಅನುರಾಧ ಸೂಚನೆ

ವಿಜಯ ದರ್ಪಣ ನ್ಯೂಸ್ ,ದೇವನಹಳ್ಳಿ            ಬೆಂಗಳೂರು ಗ್ರಾ ಜಿಲ್ಲೆ . ಜುಲೈ 25 ಸಾಂತ್ವನ ಯೋಜನೆ ಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…

Read More