ಜನ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್ ಘಾಟಿ…

Read More

11 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 24 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಡಿ ದೇವನಹಳ್ಳಿ ತಾಲ್ಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ…

Read More

ಗ್ರಾಮ ಪಂಚಾಯತಿಗಳ ಅಭಿವೃದ್ಧಿಯತ್ತ ಅಧ್ಯಕ್ಷರು ಆದ್ಯತೆ ನೀಡಬೇಕು‌:ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್  : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ‌ ದೊಡ್ಡಬಳ್ಳಾಪುರದ ಟೌನ್ ನ ಎಲ್ & ಟಿ ಫ್ಯಾಕ್ಟರಿ ಬಳಿಯ ವಿದ್ಯಾದಾನ್ ಶಾಲೆ ಮುಂಭಾಗದಲ್ಲಿರುವ ಲೋಟಸ್…

Read More

ಬರ ಪರಿಹಾರ ಹಣ ಅರ್ಹ ರೈತರಿಗೆ ಶೀಘ್ರ ತಲುಪಿಸಿ:ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿಸೆಂಬರ್ :- ಬರಗಾಲದಿಂದ ರೈತರು ಬೆಳೆದ ಬೆಳೆಗಳು ಇಳುವರಿ ಇಲ್ಲದೇ ಕುಂಠಿತವಾಗಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರ ಪರಿಹಾರ ಹಣವನ್ನು ಅರ್ಹ ರೈತರಿಗೆ ತಡಮಾಡದೆ ತಲುಪಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ಚಂಡೀಗಢದಲ್ಲಿ ನಡೆದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ಸ

ವಿಜಯ ದರ್ಪಣ ನ್ಯೂಸ್ ಪಂಜಾಬ್ ನ ಚಂಡಿಗಡದಲ್ಲಿ  ನಡೆದ 61ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ನಾಲ್ಕು ಪದಕಗಳನ್ನು  ಗೆದ್ದುಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 18 ಸ್ಕೇಟರ್ ಭಾಗವಹಿಸಿದ್ದು , ಇವರಲ್ಲಿ  ನಾಲ್ಕು ಸ್ಕೇಟರ್ಸಗಳು ಪದಕಗಳನ್ನು ಪಡೆದಿದ್ದಾರೆ.ಕುಶಲ ರವಿ  (ಬೆಳ್ಳಿ ಪದಕ),ಆರ್ಯ ಮಂಜುನಾಥ್ (ಕಂಚು),ಚಿನ್ಮಯ್ ಎಸ್ ಗೌಡ (ಕಂಚು),ಯಶಸ್ವಿನಿ ಎನ್ (ಕಂಚು).ಇವರೆಲ್ಲರೂ ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್  ಕ್ಲಬ್ ನಲ್ಲಿ ತರಬೇತಿ ಪಡೆದವರಾಗಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಅಧ್ಯಕ್ಷೆ ಭಾರತಿ…

Read More

ಮಂಡಿಬೆಲೆ ಎಂ ಪಿ ಸಿ ಎಸ್ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಆಯ್ಕೆ.

ವಿಜಯ ದರ್ಪಣ ನ್ಯೂಸ್  ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಅವಿರೋಧವಾಗಿ ಆಯ್ಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು, ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ  ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಎಸ್ ಶಿವಣ್ಣ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ. ತಮ್ಮಣ್ಣ ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರು ಸಹ ನಾಮಪತ್ರಗಳನ್ನು ಸಲ್ಲಿಸಿರುವುದಿಲ್ಲ. ನಾಮಪತ್ರಗಳನ್ನು ಪರಿಶೀಲಿಸಿದ ರಿಟರ್ನಿಂಗ್ ಆಫೀಸರ್ ನಾಗಭೂಷಣ್…

Read More

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್,10  :- ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ಭೂತಾಯಿ ಮಡಿಲಲ್ಲಿ ಚಿರನಿದ್ರೆಗೆ ಹಿರಿಯ ನಟಿ ಲೀಲಾವತಿ

ವಿಜಯ ದರ್ಪಣ ನ್ಯೂಸ್  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಭೂತಾಯಿ ಮಡಿಲಲ್ಲಿ ಚಿರನಿದ್ರೆಗೆ ಹಿರಿಯ ನಟಿ ಲೀಲಾವತಿ.. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 9 – ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಶನಿವಾರ ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಮೂರು ಸುತ್ತಿನ…

Read More

ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ ಸೂಚನೆ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 06:- ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ…

Read More

ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 30 : 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More