ನಗರಸಭೆ ಪೌರಾಯುಕ್ತರ ವರ್ಗಾವಣೆಗೆ ಸದಸ್ಯರ ನಿರ್ಧಾರ
ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜನವರಿ: ನಗರಸಭೆಯ ಚುನಾಯಿತ ಜನಪ್ರತಿನಿಧಿಗಳು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಪೌರಾಯುಕ್ತರ ವರ್ಗಾವಣೆಗೆ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ ತುರ್ತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಪೌರಾಯುಕ್ತ ವರ್ಗಾವಣೆಯ ಶಿಫಾರಸ್ಸಿಗೆ ಕೈ ಎತ್ತುವುದರ ಮೂಲಕ ಆಡಳಿತ ಮತ್ತು ವಿಪಕ್ಷ ಸದಸ್ಯರು ಸಹಮತ ವ್ಯಕ್ತಪಡಿಸಿದರು. ತುರ್ತು ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ಸೇರಿದಂತೆ ಸರ್ವ ಸದಸ್ಯರು ಭಾಗಿಯಾಗಿದ್ದರು. ನಗರಸಭೆಯಲ್ಲಿ…