ಸಾರ್ವಜನಿಕ ಹಣದ ಹಗಲು ದರೋಡೆ……..
ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಹಣದ ಹಗಲು ದರೋಡೆ…….. ಇದು ಲಂಚವಲ್ಲ, ಭ್ರಷ್ಟಾಚಾರವಲ್ಲ, ಅದಕ್ಕಿಂತ ದೊಡ್ಡ ಶಬ್ದಗಳಲ್ಲಿ ವರ್ಣಿಸಬೇಕೆಂದರೆ ಕಳ್ಳತನ ಮತ್ತು ಹಗಲು ದರೋಡೆ…….. ಕರ್ನಾಟಕ ಸರ್ಕಾರದ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 95 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಆರೋಪದ ಸುತ್ತ ಈಗಾಗಲೇ ಎಸ್ ಐ ಟಿ ತನಿಖೆ ಪ್ರಾರಂಭವಾಗಿದೆ. ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಒಂದಿಬ್ಬರು ಅಧಿಕಾರಿಗಳು ತಲೆ ತಪ್ಪಿಸಿಕೊಂಡಿದ್ದಾರೆ, ಮತ್ತೆ ಕೆಲವರ ಬಂಧನವಾಗಿದೆ. ಮಾನ್ಯ ಮಂತ್ರಿಗಳು ನೈತಿಕ ಹೊಣೆ…