ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ವಿಜಯ ದರ್ಪಣ ನ್ಯೂಸ್… ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ…… ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ಅಮಾನುಷ ದೌರ್ಜನ್ಯ ಖಂಡಿಸಬೇಕಿರುವುದು ಕೇವಲ ಹಿಂದುಗಳು ಮಾತ್ರವಲ್ಲ, ಭಾರತದ, ವಿ‌ಶ್ವದ ಎಲ್ಲ ಧರ್ಮಗಳ, ಪ್ರತಿ ಪ್ರಜೆಯು ಆ ಹಿಂಸಾಕೃತ್ಯವನ್ನು ಖಂಡಿಸಲೇಬೇಕು. ಅದೇ ನಿಜವಾದ ಮಾನವೀಯ ಧರ್ಮ…….. ಮತಾಂಧರ ನಡುವೆ ನಲುಗುತ್ತಿರುವ ಅಮಾಯಕ ಜೀವಗಳು….. ವಿಶ್ವದಲ್ಲಿ ಸಾಮಾನ್ಯವಾಗಿ ಒಂಬತ್ತು ರೀತಿಯ ದೇಶಗಳು ಅಸ್ತಿತ್ವದಲ್ಲಿವೆ… ಒಂದು, ಅತ್ಯಂತ ಬಡತನದ ದೇಶಗಳು. ಉದಾಹರಣೆಗೆ ಇಥಿಯೋಪಿಯಾ, ಸುಡಾನ್, ಸೊಮಾಲಿಯಾ, ಬುರುಂಡಿ…

Read More

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು…….

ವಿಜಯ ದರ್ಪಣ ನ್ಯೂಸ್… ಇನ್ನಷ್ಟು ಬಹುದೊಡ್ಡ ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆಗಳ ಹೊಸ್ತಿಲಿನಲ್ಲಿ………. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು………….. ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ ಕನಸುಗಳಲ್ಲಿ ಮುಖ್ಯವಾದವು. ರಸ್ತೆ ಹೊರತುಪಡಿಸಿ ನೀರು ಮತ್ತು ಗಾಳಿಯಲ್ಲಿ ಸಂಚರಿಸುವುದು ತುಂಬಾ ದುಬಾರಿಯಾದುದು. ಆಧುನಿಕ ಕಾಲದಲ್ಲಿ ವಿಮಾನ ಸಂಚಾರ ತುಂಬಾ ಸುಲಭವಾಗಿದೆ. ಆದರೆ ಅದು ಶ್ರೀಮಂತರ ಪ್ರಯಾಣ ವ್ಯವಸ್ಥೆ ಎಂಬುದು ಮಾತ್ರ ಸತ್ಯ. ಏಕೆಂದರೆ ಭಾರತದಲ್ಲಿ ಕೇವಲ…

Read More

1942 – ಆಗಸ್ಟ್ 9, ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ……

ವಿಜಯ ದರ್ಪಣ ನ್ಯೂಸ್… 82 ವರ್ಷಗಳ ಹಿಂದೆ…… 1942 – ಆಗಸ್ಟ್ 9, ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ…… 2024 – ಆಗಸ್ಟ್ 9, ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ, ಮತಾಂಧರೇ, ಸಂವಿಧಾನ ವಿರೋಧಿಗಳೇ..‌ ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ. ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ…… ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು………

Read More

ಹರಕೆ ಮತ್ತು ಶಾಪ, ಜೊತೆಗೆ ಇವೊತ್ತಿನ ನಾಗರ ಪಂಚಮಿ……

ವಿಜಯ ದರ್ಪಣ ನ್ಯೂಸ್…. ಹರಕೆ ಮತ್ತು ಶಾಪ, ಜೊತೆಗೆ ಇವೊತ್ತಿನ ನಾಗರ ಪಂಚಮಿ…… ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು……. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು……. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು…… ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು…….. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂಶ ಬಂದಿರಬಹುದು…… ಆಕಸ್ಮಿಕವಾಗಿ ನಾವು ಶಪಿಸಿದಂತೆ ನಮ್ಮ ವಿರೋಧಿಗಳಿಗೆ ಆಘಾತ ಸಂಭವಿಸಿರಬಹುದು…….. ಹರಕೆಗಳು ಸಂಭವಿಸಲು ಅವು ನಮ್ಮ ಮಿತಿಯಲ್ಲಿರಬೇಕು. ಮದುವೆ, ಮಕ್ಕಳು, ಪರೀಕ್ಷೆ, ಉದ್ಯೋಗ, ಆರೋಗ್ಯ, ಆಸ್ತಿ, ಅಧಿಕಾರ ಎಲ್ಲವೂ…

Read More

ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು…..

ವಿಜಯ ದರ್ಪಣ ನ್ಯೂಸ್ …. ” ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು….. ” ಜಾರ್ಜ್ ಬರ್ನಾರ್ಡ್ ಶಾ, ನೊಬೆಲ್ ಪ್ರಶಸ್ತಿ ಪುರಸ್ಕೃತ,…… ಕೇಳಿಸಿತೇ ಈ ವಾಕ್ಯಗಳು, ಅರ್ಥವಾಯಿತೇ ಈ ಮಾತುಗಳು, ಈಗಲೂ ಎಷ್ಟೊಂದು ಪ್ರಸ್ತುತ ಅಲ್ಲವೇ……. ಇದು ಸಹಜ, ಸ್ವಾಭಾವಿಕ ಮತ್ತು ಒಳ್ಳೆಯ ವಿಷಯಗಳಿಗೆ ಮಾತ್ರ ಅನ್ವಯ. ದುಷ್ಟ, ವಿನಾಶಕಾರಿ ಮತ್ತು ಜೀವ ವಿರೋಧಿ ಕೆಲಸಗಳಿಗೆ ಇದು ಅನ್ವಯವಾಗುವುದಿಲ್ಲ. ನಾವು ಏನನ್ನಾದರೂ ವಿಭಿನ್ನ ವಿಶಿಷ್ಟ, ಸಾಮಾನ್ಯರಿಗೆ ಅಸಾಮಾನ್ಯವಾಗಿ ಕಾಣುವಂತ…

Read More

ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ……

ವಿಜಯ ದರ್ಪಣ ನ್ಯೂಸ್… ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ…… ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ ಮಾತ್ರ ರಕ್ಷಣಾತ್ಮಕವಾಗಿ ಹೋರಾಡುತ್ತಿದ್ದ….. ಆದರೆ ಮಧ್ಯಕಾಲೀನ ಯುಗದಲ್ಲಿ ವಿಶ್ವದ ಬಹುತೇಕ ನಾಗರಿಕತೆಗಳಲ್ಲಿ ಹಿಂಸೆ ತಾಂಡವವಾಡುತ್ತಿತ್ತು. ಮನುಷ್ಯನ ವಿಸ್ತರಣಾ ಸ್ವಭಾವ ಮತ್ತು ತನ್ನ ಅಹಂ…

Read More

ಮಳೆರಾಯನೊಂದಿಗೆ ಒಂದು ಸಂದರ್ಶನ…….. ಮಳೆ ಮಳೆ ಮಳೆ…….

ವಿಜಯ ದರ್ಪಣ ನ್ಯೂಸ್… ಮಳೆರಾಯನೊಂದಿಗೆ ಒಂದು ಸಂದರ್ಶನ…….. ಮಳೆ ಮಳೆ ಮಳೆ……. ಇದು ಮಾಡುತ್ತಿರುವ ಅನಾಹುತ ನೋಡಿ ತುಂಬಾ ಕೋಪ ಬಂತು. ಇದೇನಿದು, ಪ್ರಕೃತಿಯೇ ದೇವರು ಎಂದು ಬಹಳ ಜನ ನಂಬಿದ್ದಾರೆ. ಈಗ ಆ ದೇವರೇ ಅನೇಕ ಜನರ ಬದುಕನ್ನೇ ಕಿತ್ತುಕೊಳ್ಳುತ್ತಿದೆ. ಈಗ ನಾವು ಪ್ರಶ್ನೆ ಮಾಡಲೇ ಬೇಕಲ್ಲವೇ ? ಅದಕ್ಕಾಗಿ ಮಳೆಗೆ ಕೇಳಿದೆ……. ಯಾಕಪ್ಪ ಮಳೆರಾಯ….. ಕೊಬ್ಬು ಜಾಸ್ತಿಯಾಯ್ತ ನಿನಗೆ….. ಇಷ್ಟ ಬಂದಾಗ ಎಲ್ಲೆಂದರಲ್ಲಿ ಮಳೆ ಸುರಿಸಿ ಪ್ರವಾಹ ಸೃಷ್ಟಿಸಿ ನಮ್ಮ ಜನಗಳಿಗೆ ತೊಂದರೆ ಕೊಡುತ್ತಿರುವೆ,…

Read More

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ ಯಾವ ಹಂತಕ್ಕೆ ತಲುಪಿದೆ ಎಂದರೆ……

ವಿಜಯ ದರ್ಪಣ ನ್ಯೂಸ್…. ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯ ಯಾವ ಹಂತಕ್ಕೆ ತಲುಪಿದೆ ಎಂದರೆ…… ಹಿಂದೆಯೂ ಈ ರೀತಿಯ ಭಿನ್ನಾಭಿಪ್ರಾಯಗಳು ಇದ್ದವು. ಆಗಾಗ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಇದನ್ನು ಒಂದು ಹಂತಕ್ಕೆ ನಿಯಂತ್ರಿಸುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ತುಂಬಾ ಅತಿರೇಕವನ್ನು ಮುಟ್ಟಿದೆ. ಈ ನಡುವೆ ಕೆಲವು ರಾಜ್ಯಗಳಲ್ಲಿ ಸ್ಪೀಕರ್ ಅವರ ಹುದ್ದೆಯೂ ಸಹ ಇದೇ ರೀತಿ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ…… ಸಂವಿಧಾನದಲ್ಲಿ ಕಾನೂನುಗಳನ್ನು ಸ್ಪಷ್ಟವಾಗಿ ರಚಿಸಿದ್ದರೂ ಸಹ ” ವಿವೇಚನಾ ಅಧಿಕಾರ…

Read More

ಗೆಳೆತನದ ದಿನಾಚರಣೆಯ ಶುಭಾಶಯಗಳು..,…….

ವಿಜಯ ದರ್ಪಣ ನ್ಯೂಸ್… ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 4…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 4 …………. ” ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ ಕೊನೆಯಾಗದಿರಲಿ…

Read More

ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು…..

ವಿಜಯ ದರ್ಪಣ ನ್ಯೂಸ್… ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು….. ಭಾರತದಂತ ಬೃಹತ್ ಜನಸಂಖ್ಯೆಯ ದೇಶದಲ್ಲಿ ಪ್ರವಾಸೋದ್ಯಮ ಒಂದು ದೊಡ್ಡ ಉದ್ಯಮವಾಗಬೇಕೆ ? ನಿರುದ್ಯೋಗ ನಿವಾರಣೆಗೆ ಪ್ರವಾಸೋದ್ಯಮವು ಒಂದು ಉತ್ತಮ ಮಾರ್ಗವೇ ? ಕೇರಳದ ವೈನಾಡಿನ ಮಂಡಕೈ ಭೂಕುಸಿತ ಪ್ರಕರಣದ ನಂತರ ಈ ರೀತಿಯ ಪ್ರಶ್ನೆಗಳು ಹೇಳುತ್ತಿವೆ…. ಪ್ರವಾಸೋದ್ಯಮ ಉದ್ಯಮವಾಗಿ ಅಭಿವೃದ್ಧಿ ಹೊಂದಬೇಕಾದರೆ, ಅದು ಬಹುದೊಡ್ಡ ಆದಾಯ ಮೂಲವಾಗಬೇಕಾದರೆ, ಪ್ರಕೃತಿ ಬಹಳಷ್ಟು ಒತ್ತಡಕ್ಕೆ ಸಿಕ್ಕಿಹಾಕಿಕೊಳ್ಳುವುದು ಖಚಿತ. ಅದರಲ್ಲೂ ‌ಹಿಮಾಚ್ಚಾದಿತ ಪ್ರದೇಶಗಳು, ಬೆಟ್ಟ ಗುಡ್ಡಗಳು, ನದಿ ಕಣಿವೆಗಳು, ಜಲಪಾತಗಳು, ನಿತ್ಯ…

Read More