ಡಿಸೆಂಬರ್ 17ರಂದು ಮೈಸೂರು ಉಪ್ಪಾರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ವಿಜಯ ದರ್ಪಣ ನ್ಯೂಸ್ ಮೈಸೂರು :ಡಿಸೆಂಬರ್ 17ರಂದು ಭಾನುವಾರ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಬಡ್ತಿ ಹೊಂದಿದ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಗೌರವ ಸಲಹೆಗಾರ ಜಗನ್ನಾಥ್ ಸಾಗರ್ ತಿಳಿಸಿದರು. ಅವರು ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ…