ಶಿಕ್ಷಕರೋಬ್ಬರಲ್ಲಿ ತಂದೆ ತಾಯಿ ಇಬ್ಬರನ್ನೂ ಕಾಣಬಹುದು: ನಾಗೇಶ್.
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ನವೆಂಬರ್ 18: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬಂತೆ ಪ್ರತಿಯೊಬ್ಬರ ಬಾಳಿನಲ್ಲೂ ಜ್ಞಾನದ ದೀವಿಗೆ ಹಚ್ಚುವವರು ಗುರುಗಳು. ತಂದೆ ತಾಯಿ ಇಬ್ಬರನ್ನೂ ಶಿಕ್ಷಕರೊಬ್ಬರಲ್ಲೇ ಕಾಣಲು ಸಾಧ್ಯವೆಂದು ಸೋಲೂರು ಸರ್ಕಾರಿ ಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ಅದ್ಯಕ್ಷ ನಾಗೇಶ್ ಅಭಿಪ್ರಾಯಿಸಿದರು. ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಸೋಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಶನಿವಾರ ಹಮ್ಮಿಕೊಂಡಿದ್ದು , ಸಮಾರಂಭವನ್ನು ಉದ್ದೇಶಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಕಠಿಣ…